Oplus_16908288
ಹನೂರು : ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ಪ್ರದೇಶದಲ್ಲಿ ಮತ್ತೆ ಚಿರತೆ ಕಾಣಿಸಿಕೊಂಡಿದ್ದು ಭಕ್ತರು ಹಾಗೂ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.
ರಂಗನಾಥಸ್ವಾಮಿ ಒಡ್ಡು ಹಾಗೂ ಶನೇಶ್ವರ ದೇವಾಸ್ಥಾನ ಸುತ್ತಮುತ್ತ ಈ ಚಿರತೆ ಮತ್ತೆ ಪ್ರತ್ಯಕ್ಷವಾಗಿದ್ದು,?

ಭಕ್ತರ ಮೊಬೈಲ್ಗಳಲ್ಲಿ ಅದರ ವಿಡಿಯೋಗಳು ಸೆರೆಗೊಂಡಿವೆ. ಆಗಾಗ್ಗೆ ಇದೇ ಚಿರತೆ ಕಾಣಿಸಿಕೊಳ್ಳುತ್ತಿರುವುದು ಗಮನಾರ್ಹವಾಗಿದೆ.
ಇದೀಗ ಮತ್ತೆ ಚಿರತೆ ಕಾಣಿಸಿಕೊಂಡಿರುವ ಹಿನ್ನಲೆಯಲ್ಲಿ ದ್ವಿಚಕ್ರ ವಾಹನ ಸವಾರರು ಹಾಗೂ ಭಕ್ತರಲ್ಲಿ ಭೀತಿ ಹೆಚ್ಚಾಗಿದೆ

ಚಿರತೆ ಚಲನ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆಯನ್ನು ಹಿಡಿದು ಸುರಕ್ಷಿತವಾದ ಜಾಗಕ್ಕೆ ಬಿಡಬೇಕೆಂದು ಸಾರ್ವಜನಿಕರು ಭಕ್ತರು ಮನವಿ ಮಾಡಿಕೊಂಡಿದ್ದಾರೆ