ನೂರಕ್ಕೆ ನೂರು ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ:
1 min read
ಮೈಸೂರು: ನೂರಕ್ಕೆ ನೂರು ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ. ಯಾವುದೇ ಕಾರಣಕ್ಕೂ ಅಧಿಕಾರ ಮಾಡೋದೆ ಇಲ್ಲ. ಕಾಂಗ್ರೆಸ್ ರಾಷ್ಟ್ರ ಮಟ್ಟದಲ್ಲೇ ಒಡೆದು ನೂರು ಭಾಗವಾಗಿದೆ. ರಾಜ್ಯ ಕಾಂಗ್ರೆಸ್ ನಾಯಕತ್ವಕ್ಕೆ ಕಿತ್ತಾಟ ಶುರುವಾಗಿದೆ. ನಾನು ಬರೆದುಕೊಡ್ತೀನಿ ಯಾವ ಕಾರಣಕ್ಕೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ. ನಮ್ಮ ಶಾಸಕರಾರು ಕಾಂಗ್ರೆಸ್ಗೆ ಹೋಗಲ್ಲ ಅಂತ ಮೈಸೂರಿನಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಅಶ್ವಥ್ ನಾರಾಯಣ್ ಹೇಳಿಕೆ ನೀಡಿದ್ದಾರೆ.
ಮೈಸೂರಿನ ಕೆ.ಆರ್.ಕ್ಷೇತ್ರದಲ್ಲಿ ಮೋದಿ ಯುಗ್ ಉತ್ಸವ್ ಕಾರ್ಯಕ್ರಮದ ಅಂಗವಾಗಿ ಉದ್ಯೋಗ ಮೇಳ ಹಾಗೂ ಕೌಶಲ್ಯಾಭಿವೃದ್ಧಿ ಮೇಳ ಆಯೋಜಿಸಲಾಗಿದೆ. ಕೌಶಲ್ಯಾಭಿವೃದ್ದಿ ಯೋಜನೆಗಳ ವಿವಿಧ ಕಾರ್ಯಕ್ರಮಗಳ ಅನುಷ್ಠಾನ. ಅಸಂಘಟಿತ ವಲಯಗಳ ಕಾರ್ಮಿಕರಿಗೆ ಕಾರ್ಡ್ ವಿತರಣೆ ಕಾರ್ಯಕ್ರಮಕ್ಕೆ ಸಚಿವ ಡಾ.ಸಿ.ಎನ್.ಅಶ್ವತ್ ನಾರಾಯಣ್ ಟೇಪ್ ಕತ್ತರಿಸುವ ಮೂಲಕ ಉದ್ಯೋಗಮೇಳಕ್ಕೆ ಚಾಲನೆ ನೀಡಿದರು. ವಿದ್ಯಾರಣ್ಯಪುರಂನ ಪಾಲಿಕೆ ಉದ್ಯಾನವನದಲ್ಲಿ ಶಾಸಕ ಎಸ್.ಎ.ರಾಮದಾಸ್ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯುತ್ತಿದೆ.
ಬೈ ಎಲೆಕ್ಷನ್ ಉಸ್ತುವಾರಿಗಳ ಪಟ್ಟಿಯಲ್ಲಿ ವಿಜಯೇಂದ್ರಗೆ ಕೋಕ್ ಹಿನ್ನೆಲೆ: ಯಾರನ್ನ ಕೈ ಬಿಟ್ಟಿದು ಎಂಬುದು ಮುಖ್ಯವಲ್ಲ. ಬಿಜೆಪಿಯಲ್ಲಿ ಎಲ್ಲರೂ ಪ್ರಚಾರದಲ್ಲಿ ಭಾಗವಹಿಸಬಹುದು. ವಿಜಯೇಂದ್ರರನ್ನ ಪ್ರಚಾರಕ್ಕೆ ಬಳಸಿಕೊಳ್ತಾರೆ. ಇದಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದರು.
ರಾಜ್ಯದಲ್ಲಿ ಮೋದಿ ಅಲೆ ಬಗ್ಗೆ ಬಿಎಸ್ವೈ ಹೇಳಿಕೆ ವಿಚಾರ: ಹಾಸನಕ್ಕೆ ಹೋಗಿ ಕೇಳಿದ್ರು ಶೇ 65% ಜನ ಮೋದಿ ಪ್ರಧಾನಿ ಆಗಬೇಕು ಅಂತಾರೆ. ಕನಕಪುರಕ್ಕೂ ಹೋಗಿ ಕೇಳಿದ್ರು ಮೋದಿ ಹೇಸರೇಳ್ತಾರೆ. ಅಲ್ಲೆಲ್ಲೂ ಸ್ಥಳೀಯ ನಾಯಕರ ಹೆಸರೇಳಲ್ಲ ದಳಪತಿಗಳು, ಅಂತ ಡಿಕೆಶಿಗೆ ಟಾಂಗ್ ಕೊಟ್ಟ ಡಾ.ಅಶ್ವಥ್ನಾರಾಯಣ್.