ಆರ್.ಅಶೋಕ್‌ ಸಾಮ್ರಾಟ್‌ ರೀತಿ ಆಡುತ್ತಾನೆ: ಸಚಿವ ವಿ.ಸೋಮಣ್ಣ ಅಸಮಾಧಾನ

1 min read

ಬೆಂಗಳೂರು,ಅ.9 –ಸಚಿವ ಆರ್.ಅಶೋಕ್ ಸಾಮ್ರಾಟ್ ರೀತಿ ಆಡುತ್ತಾನೆ ಎಂದು ಸಚಿವ ವಿ.ಸೋಮಣ್ಣ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು ನಗರ ಜಿಲ್ಲಾ ಉಸ್ತುವಾರಿ ವಿಚಾರಕ್ಕೆ ಸಂಬಂಧಿಸಿದಂತೆ ಆರ್.ಅಶೋಕ್‌ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿರುವ ಸೋಮಣ್ಣ ಅವರು, ನಾನು ಸಚಿವ ಆಗಿದ್ದಾಗ ಆರ್. ಅಶೋಕ್ ಇನ್ನೂ ಶಾಸಕನಾಗಿದ್ದ. ನಾನು ಕರೆದಿದ್ದ ಸಭೆಗೆ ಸಚಿವ ಆರ್.ಅಶೋಕ್ ಬಂದಿರಲಿಲ್ಲ. ಅವರು ಸಭೆ ಕರೆದರೆ ನಾನು ಹೋಗುತ್ತೀನಿ. ನಾನು ಸಭೆ ಕರೆದರೆ ಅವರು ಬರಬೇಕು. ಬಂದಿಲ್ಲ ಅಂದ್ರೆ ಅವರಿಗೇ ಲಾಸ್. ಮನೆಗಳನ್ನು ನಮ್ಮ ಕಾರ್ಯಕರ್ತರಿಗೆ ಕೊಡುತ್ತೇನೆ ಅಷ್ಟೆ. ನಾನು ಸೀನಿಯರ್ ಇದ್ದೇನೆ. ಅಶೋಕ್ ಅಂತ ಅವರ ಅಪ್ಪ, ಅಮ್ಮ ಯಾಕೆ ಹೆಸರಿಟ್ರೋ. ಆರ್.ಅಶೋಕ್ ಸಾಮ್ರಾಟ್ ರೀತಿಯೇ ಆಡುತ್ತಾನೆ ಎಂದು ಗುಡುಗಿದರು.

ಬೆಂಗಳೂರು ನಗರ ಉಸ್ತುವಾರಿ ಕುರಿತು ಪ್ರತಿಕ್ರಿಯಿಸಿದ ಸಚಿವ ವಿ.ಸೋಮಣ್ಣ, ಉಸ್ತುವಾರಿಯನ್ನು ಯಾರಿಗೆ ಬೇಕಾದರೂ ಕೊಡಲಿ. ಆದರೆ ಉಸ್ತುವಾರಿ ಕೊಡುವಾಗ ಜ್ಯೇಷ್ಠತೆ ಪರಿಗಣಿಸಲಿ. ನಾನು ಬೆಂಗಳೂರಿನ ಹಿರಿಯ ಸಚಿವ. ನನ್ನನ್ನು ಪರಿಗಣಿಸಿ ಎಂದು ಸಿಎಂ ಬೊಮ್ಮಾಯಿಗೆ ಕೇಳಿದ್ದೇನೆ. ಉಸ್ತುವಾರಿ ಸಿಎಂ ಬಳಿ ಇದ್ದರೆ ನಮ್ಮ ಅಭ್ಯಂತರ ಇಲ್ಲ. ಬೇರೆಯವರಿಗೆ ಕೊಟ್ಟರೆ ನನ್ನನ್ನು ಪರಿಗಣಿಸಿ ಎಂದು ಕೇಳಿದ್ದೇನೆ ಅಂತ ವಿ.ಸೋಮಣ್ಣ ಹೇಳಿದರು.

About Author

Leave a Reply

Your email address will not be published. Required fields are marked *