ರಸ್ತೆ ಸಂಪರ್ಕವೇ ಕಾಣದ ಸ್ಮಶಾನದ ರಸ್ತೆ: ಅಧಿಕಾರಿಗಳ ನಿರ್ಲಕ್ಷಕ್ಕೆ ಸಾರ್ವಜನಿಕರ ಹಿಡಿ ಶಾಪ
1 min read
ಮೈಸೂರು: ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ಆದಿ ಬೆಟ್ಟಹಳ್ಳಿ ಗ್ರಾಮದಲ್ಲಿ ಅಧಿಕಾರಿಗಳ ನಿರ್ಲಕ್ಷಕ್ಕೆ ಸಾರ್ವಜನಿಕರ ಹಿಡಿ ಶಾಪ ಹಾಕುತ್ತಿದ್ದಾರೆ.
ಗ್ರಾಮದಲ್ಲಿ ರಸ್ತೆ ಸಂಪರ್ಕವೇ ಕಾಣದ ಸ್ಮಶಾನದ ರಸ್ತೆ. ಮಳೆ ನೀರು ತುಂಬಿದ ಕೆಸರು ಗದ್ದೆಯಂತಾಗಿದೆ ಇಲ್ಲಿಯ ರಸ್ತೆ. ಅದೇ ರಸ್ತೆಯಲ್ಲಿ ಗ್ರಾಮಸ್ಥರು ಶವ ಹೊತ್ತೋಯ್ದು ಕಾರ್ಯ ಮಾಡುತ್ತಿದ್ದಾರೆ. ಅಧಿಕಾರಿಗಳ ನಿರ್ಲಕ್ಷಕ್ಕೆ ಸಾರ್ವಜನಿಕರ ಹಿಡಿ ಶಾಪ ಹಾಕುತ್ತಿದ್ದಾರೆ.

ಜನಪ್ರತಿನಿದಿಗಳು, ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆ. ಮಳೆಗಾಲದಲ್ಲಿ ಶವ ಸಾಗಿಸಲು ಹರಸಾಹಸ ಪಡುವ ಪರಿಸ್ಥಿತಿ ಉಲ್ಬಣಿಸಿದೆ. ಕೂಡಲೇ ರಸ್ತೆ ಪಡಿಸುವಂತೆ ಗ್ರಾಮಸ್ಥರು ಮನವಿ ಮಾಡಿದ್ದಾರೆ.