ಪರಿಷತ್ ಚುನಾವಣೆ ಹಿನ್ನೆಲೆ ಎಸಿಯಿಂದ ಮತಗಟ್ಟೆಗಳಿಗೆ ಸರ್ಪ್ರೈಸ್ ವಿಸಿಟ್!
1 min read
ಮೈಸೂರಿನಲ್ಲಿ ವಿಧಾನ ಪರಿಷತ್ ಚುನಾವಣೆ ಮತದಾನ ಶಾಂತಿಯುತವಾಗಿ ನೇರವೇರಿದ್ದು ಮತಗಟ್ಟೆಗೆ ಹಿರಿಯ ಅಧಿಕಾರಿಗಳು ಭೇಟಿ ಕೊಟ್ಟು ಪರಿಶೀಲನೆ ನಡೆಸಿದ್ದಾರೆ.

ಚುನಾವಣೆ ಹಿನ್ನೆಲೆಯಲ್ಲಿ ಯಾವುದೇ ಸಮಸ್ಯೆ ಆಗದಂತೆ ಮೈಸೂರು ಜಿಲ್ಲಾಡಳಿತ ಕ್ರಮ ವಹಿಸಿದ್ದು ಇಂದು ಮೈಸೂರು ಉಪವಿಭಾಗಾಧಿಕಾರಿ ಕಮಲಾಭಾಯಿ ಅವರು ಮೈಸೂರು ಜಿಲ್ಲೆಯ ವಿವಿಧ ಮತಗಟ್ಟೆಗಳಿಗೆ ತೆರಳಿ, ಮತದಾನ ಸುಗಮ ಹಾಗೂ ಶಾಂತಿಯುತವಾಗಿ ನಡೆಯುತ್ತಿರುವುದನ್ನು ಪರಿಶೀಲನೆ ನಡೆಸಿದರು.

ಇದೇವೇಳೆ ಮತದಾನ ಬಗ್ಗೆ ಮಾಹಿತಿ ಪಡೆದು, ಯಾವುದೇ ಸಮಸ್ಯೆ ಆಗದಂತೆ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.