ಅಂಬೇಡ್ಕರ್ ಗೆ ಅಪಮಾನ: ನ್ಯಾಯಾಧೀಶರ ವಿರುದ್ಧ ಕ್ರಮ ಜರುಗಿಸುವಂತೆ ಒತ್ತಾಯಿಸಿ ಪ್ರತಿಭಟನೆ
1 min read
ಮೈಸೂರು,ಜ.31-ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಅಪಮಾನ ಮಾಡಿರುವ ರಾಯಚೂರು ಜಿಲ್ಲಾ ನ್ಯಾಯಾಧೀಶರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಒತ್ತಾಯಿಸಿ ಮೈಸೂರು ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಕಾನೂನು ಮತ್ತು ಮಾನವ ಹಕ್ಕುಗಳ ಸಮಿತಿಯವರು ಪ್ರತಿಭಟನೆ ನಡೆಸಿದರು.
ಇಂದು ನಗರದ ನ್ಯಾಯಾಲಯದ ಎದುರು ಪ್ರತಿಭಟನೆ ನಡೆಸಿದ ಸಮಿತಿ ಅವರು ಅಂಬೇಡ್ಕರ್ ಅವರಿಗೆ ಅಪಮಾನ ಮಾಡಿದ ರಾಯಚೂರು ಜಿಲ್ಲಾ ನ್ಯಾಯಾಧೀಶರಾದ ಮಲ್ಲಿಕಾರ್ಜುನಗೌಡರ ವಿರುದ್ಧ ಗೌರವಾನ್ವಿತ ರಾಜ್ಯ ಉಚ್ಛ ನ್ಯಾಯಾಲಯದ ಮುಖ್ಯ ನ್ಯಾಯಾಧೀಶರು ಕಾನೂನು ಕ್ರಮ ಜರುಗಿಸಿ ಹುದ್ದೆಯಿಂದ ವಜಾಗೊಳಿಬೇಕೆಂದು ಆಗ್ರಹಿಸಿದರು.
ಭಾರತದ ನ್ಯಾಯಾಂಗ ವ್ಯವಸ್ಥೆ ಸಂವಿಧಾನದ ಆಧಾರದಡಿ ಕಾರ್ಯಹಿಸುತ್ತಿದ್ದು, ನ್ಯಾಯಾಂಗದ ಉನ್ನತ ಸ್ಥಾನವನ್ನು ಅಲಂಕರಿಸಿ ಸಂವಿಧಾನದ ಆಶಯಗಳನ್ನು ಎತ್ತಿಹಿಡಿಯಬೇಕಾದವರೇ ಜಾತಿವಾದಿ, ಧರ್ಮವಾದಿಗಳಾಗಿರುವುದು ನ್ಯಾಯಾಂಗ ವ್ಯವಸ್ಥೆಗೆ ಮಾಡಿರುವ ಅವಮಾನವಾಗಿದೆ ಎಂದು ಪ್ರತಿಭಟನಕಾರರು ಕಿಡಿಕಾರಿದರು.