ಹಿಜಾಬ್, ಕೇಸರಿ ಶಾಲು ವಿವಾದ: ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ
1 min read
ನವದೆಹಲಿ,ಫೆ.11-ಹಿಜಾಬ್-ಕೇಸರಿ ಶಾಲು ವಿವಾದ ಕುರಿತು ನಿನ್ನೆ ತ್ರಿ ಸದಸ್ಯ ಪೀಠ ಹೊರಡಿಸಿದ್ದ ಮಧ್ಯಂತರ ಆದೇಶವನ್ನು ಪ್ರಶ್ನಿಸಿ ಅರ್ಜಿದಾರರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.
ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನ್ಯಾಯಪೀಠವು ನಿರಾಕರಿಸಿದೆ.
ಹಿಜಾಬ್ ನಿಷೇಧವನ್ನು ಪ್ರಶ್ನಿಸಿ ಪ್ರಕರಣ ಬಾಕಿ ಇರುವ ಸಂದರ್ಭದಲ್ಲಿ ಕಾಲೇಜುಗಳಲ್ಲಿ ಯಾವುದೇ ಧಾರ್ಮಿಕ ಉಡುಪನ್ನು ಧರಿಸಬೇಡಿ ಎಂದು ಕರ್ನಾಟಕ ಹೈಕೋರ್ಟ್ ನಿನ್ನೆ ಹೊರಡಿಸಿದ ಮಧ್ಯಂತರ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ವಿಶೇಷ ರಜೆ ಅರ್ಜಿ ಸಲ್ಲಿಸಲಾಗಿದೆ.
ಈ ಅರ್ಜಿಯನ್ನು ತುರ್ತು ವಿಚಾರಣೆ ನಡೆಸುವಂತೆಯೂ ಅರ್ಜಿದಾರರ ಪರ ವಕೀಲರು ಸುಪ್ರೀಂ ಕೋರ್ಟ್ ನ್ಯಾಯಪೀಠಕ್ಕೆ ಮನವಿ ಮಾಡಿತ್ತು. ಆದರೆ ಸುಪ್ರೀಂ ಕೋರ್ಟ್ ನ್ಯಾಯ ಪೀಠವು ತುರ್ತು ಅರ್ಜಿಯ ವಿಚಾರಣೆಗೆ ನಿರಾಕರಿಸಿದೆ.