`ಕನ್ನೇರಿ’ ಚಿತ್ರದ ಮತ್ತೊಂದು ಹಾಡು ರಿಲೀಸ್: `ನೆಲೆ ಇರದ ಕಾಲು’ ಎಂಬ ಮನ ಮಿಡಿಯುವ ಹಾಡು

1 min read

ಬೆಂಗಳೂರು,ಫೆ.11-ಕೆನ್ನೇರಿ ಸಿನಿಮಾದ ಮತ್ತೊಂದ ಹಾಡು ಇದೀಗ ರಿಲೀಸ್ ಆಗಿದೆ. ‘ನೆಲೆ ಇರದ ಕಾಲು’ ಹಾಡಿನ ಲಿರಿಕಲ್ ವೀಡಿಯೋ ಎ2 ಮ್ಯೂಸಿಕ್ ನಲ್ಲಿ ಬಿಡುಗಡೆಯಾಗಿದೆ.

‘ನೆಲೆ ಇರದ ಕಾಲು’ ಹಾಡನ್ನು ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸುನೀಲ್ ಪುರಾಣಿಕ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.

ನಿರ್ದೇಶಕ ನೀನಾಸಂ ಮಂಜು ನೈಜ ಘಟನೆಯನ್ನಾಧರಿಸಿ ಕೆನ್ನೇರಿ ಸಿನಿಮಾ ಸಿದ್ಧಗೊಳಿಸಿದ್ದಾರೆ. ಇದಕ್ಕೂ ಮೊದಲು 'ಮೂಕಹಕ್ಕಿ’ ಸಿನಿಮಾ ಮಾಡಿದ್ದರು.


ಕಾಡ ಮಕ್ಕಳ ಒಡಲ ಬೇಗುದಿಯ ನೋವಿನ ಕಥೆ ಈ ಹಾಡಿನಲ್ಲಿದ್ದು, ವಿ.ರಘು ಶಾಸ್ತ್ರಿ ಸಾಹಿತ್ಯ ಬರೆದಿದ್ದು, ವಾಣಿ ಹರಿಕೃಷ್ಣ ದನಿಯಾಗಿದ್ದಾರೆ.


ಈಗಾಗಲೇ ಸಿನಿಮಾದ ಬೆಟ್ಟ ಕಣಿವೆಗಳ ಹೊಟ್ಟೇಲಿ ಗೂಡುಕಟ್ಟಿ’ ಮೆಚ್ಚುಗೆಗಳಿಸಿದೆ.

ಪಿ.ಪಿ.ಹೆಬ್ಬಾರ್ ಮತ್ತು ಚಂದ್ರಶೇಖರ್ ಬುಡ್ಡಿದೀಪ ಸಿನಿಮಾ ಹೌಸ್ ಬ್ಯಾನರ್ ನಡಿ ‘ಕನ್ನೇರಿ’ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಚಿತ್ರದಲ್ಲಿ ಅರ್ಚನಾ ಮಧುಸೂಧನ್ ಮುಖ್ಯ ಭೂಮಿಕೆಯಲ್ಲಿ ಅಭಿನಯಿಸಿದ್ದು, ಅರುಣ್ ಸಾಗರ್, ಅನಿತ ಭಟ್, ಸರ್ದಾರ್ ಸತ್ಯ, ಎಂ.ಕೆ.ಮಠ್, ಕರಿಸುಬ್ಬು ತಾರಾ ಬಳಗದಲ್ಲಿದ್ದಾರೆ. ಖ್ಯಾತ ಸಂಗೀತ ನಿರ್ದೇಶಕ ಕದ್ರಿ ಮಣಿಕಾಂತ್ ಸಂಗೀತ ಸಂಯೋಜನೆ, ಗಣೇಶ್ ಹೆಗ್ಡೆ ಕ್ಯಾಮೆರಾ ವರ್ಕ್, ಸುಜಿತ್ ಎಸ್ ನಾಯಕ್ ಸಂಕಲನ ಚಿತ್ರಕ್ಕಿದೆ.


About Author

Leave a Reply

Your email address will not be published. Required fields are marked *