ಮೈಸೂರಿನಿಂದ ಮಂಡ್ಯಕ್ಕೆ ತೆರಳಿದ ಮಾಜಿ ಸಿಎಂ ಸಿದ್ದರಾಮಯ್ಯ
1 min read
ಮೈಸೂರು: ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮೈಸೂರಿನಿಂದ ಮಂಡ್ಯಕ್ಕೆ ತೆರಳಿದ್ದಾರೆ. ಇಂದು ಮಂಡ್ಯದಲ್ಲಿ ಕೇಂದ್ರ-ರಾಜ್ಯ ಸರ್ಕಾರಗಳ ಬೆಲೆ ಏರಿಕೆ ನೀತಿ ಖಂಡಿಸಿ ಪ್ರತಿಭಟನೆ ನಡೆಯಲಿದೆ. ಪ್ರತಿಭಟನಾ ನೇತೃತ್ವವನ್ನು ಸಿದ್ದರಾಮಯ್ಯ ಅವರು ವಹಿಸಿಕೊಂಡಿದ್ದಾರೆ. ಹೀಗಾಗಿ ಶಾರದಾ ದೇವಿ ನಗರದ ತಮ್ಮ ನಿವಾಸದಿಂದ ಮಂಡ್ಯಕ್ಕೆ ತೆರಳಿದ್ದಾರೆ.
ಸಿದ್ದರಾಮಯ್ಯ ಅವರು ನಾಲ್ಕು ದಿನಗಳ ಹಳೆ ಮೈಸೂರು ಪ್ರಾಂತ್ಯದ ಪ್ರವಾಸದಲ್ಲಿದ್ದಾರೆ. ಸಿದ್ದು ಮೈಸೂರಿಗೆ ಆಗಮಿಸಿದ ಹಿನ್ನೆಲೆ ನಿವಾಸದ ಮುಂದೆ ಕಾರ್ಯಕರ್ತರು ಜಮಾಯಿಸಿದ್ದರು. ಇನ್ನು ಇಂದು ಸಂಜೆ ಮತ್ತೆ ಮೈಸೂರಿಗೆ ಆಗಮಿಸಿ ವಾಸ್ತವ್ಯ ಹೂಡಲಿದ್ದಾರೆ. ನಾಳೆ ಚಾಮರಾಜನಗರ ಜಿಲ್ಲೆಗೆ ತೆರಳಲಿದ್ದಾರೆ.