ಸೆಲ್ಫಿ ತೆಗೆಯಲು ಹೋಗಿ ನೀರುಪಾಲಾದ ಗೃಹಿಣಿ

1 min read

ನಂಜನಗೂಡು: ಗೃಹಿಣಿಯೊಬ್ಬರು ಸೆಲ್ಫಿ ತೆಗೆಯಲು ಹೋಗಿ ನೀರುಪಾಲಾದ ಘಟನೆ ಪ್ರಸಿದ್ಧ ಯಾತ್ರಾಸ್ಥಳ ಶ್ರೀ ಕ್ಷೇತ್ರ ಸಂಗಮ ಬಳಿಯ ಕಪಿಲಾ ನದಿಯಲ್ಲಿ ನಡೆದಿದೆ.

ನಂಜನಗೂಡು ತಾಲ್ಲೂಕಿನ ಶ್ರೀ ಕ್ಷೇತ್ರ ಸಂಗಮದ ಕಪಿಲಾ ನದಿಯಲ್ಲಿ ಈ ಘಟನೆ ನಡೆದಿದೆ. ಚಾಮರಾಜನಗರ ಜಿಲ್ಲೆ ನಂಜದೇವನಪುರ ಗ್ರಾಮದ ಗಿರೀಶ್ ಎಂಬುವರ ಪತ್ನಿ ಕವಿತಾ 38 ವರ್ಷದ ಮೃತ ಗೃಹಿಣಿ.

ಮೃತ ಗೃಹಿಣಿ ಕವಿತಾ

ಮೈಸೂರು ತಾಲ್ಲೂಕಿನ ದೂರ ಗ್ರಾಮದ ಪಿಎಲ್ ಡಿ ಬ್ಯಾಂಕ್ ಅಧ್ಯಕ್ಷ ರಾದ ಡಿ ಬಿ ನಾಗರಾಜ್ ಎಂಬುವರ ಪುತ್ರಿ ಮೃತ ಗೃಹಿಣಿ ಕವಿತಾ. ಮೃತ ಗೃಹಿಣಿ ಕವಿತಾ ಮತ್ತು ಪತಿ ಗಿರೀಶ್ ಹಾಗೂ ಪುತ್ರಿಯ ಜತೆಗೂಡಿ ಯಾತ್ರಾಸ್ಥಳ ಸಂಗಮ ಕ್ಷೇತ್ರಕ್ಕೆ ಪೂಜೆ ಸಲ್ಲಿಸಲು ಆಗಮಿಸಿದ್ದಾರೆ. ದೇವಾಲಯದ ಪ್ರವೇಶಕ್ಕೂ ಮುನ್ನ ಶ್ರೀಕ್ಷೇತ್ರ ಸಂಗಮದ ಮುಂಭಾಗದಲ್ಲೇ ಕಪಿಲಾ ನದಿ ದಡದಲ್ಲಿ ಕಾಲು ತೊಳೆಯಲು ತೆರಳಿದ್ದಾರೆ. ಕಾಲು ತೊಳೆದು ನೀರು ಸೇವಿಸಿದ ಬಳಿಕ ಮೊಬೈಲ್ ಪೋನಿನ ಮೂಲಕ ಸೆಲ್ಫಿ ತೆಗೆಯಲು ಮುಂದಾಗಿದ್ದಾರೆ.

ಮೊಬೈಲ್ ಫೋನ್ ಮೂಲಕ ಸೆಲ್ಫಿ ತೆಗೆಯುತ್ತಿದ್ದ ಕವಿತಾ ಕಾಲು ಜಾರಿ ನದಿಗೆ ಬಿದ್ದು ಪ್ರಾಣ ಕಳೆದುಕೊಂಡಿದ್ದಾರೆ. ಸಮೀಪದಲ್ಲೇ ಇದ್ದ ಪತಿ ಗಿರೀಶ್ ಮತ್ತು ಪುತ್ರಿಯ ಆಕ್ರಂಧನ ಮುಗಿಲು ಮುಟ್ಟುವಂತಿದೆ. ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಮೃತ ಯುವತಿಯ ಶವವನ್ನು ಕಪಿಲಾ ನದಿಯಿಂದ ಹೊರತೆಗೆದು ಮರಣೋತ್ತರ ಪರೀಕ್ಷೆಗೆ ನಂಜನಗೂಡಿನ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

About Author

Leave a Reply

Your email address will not be published. Required fields are marked *