ಯುವ ಬ್ರಿಗೇಡ್ ಕಾರ್ಯಕರ್ತ ವೇಣುಗೋಪಾಲ್ ನಿವಾಸಕ್ಕೆ ಬಿಜೆಪಿ ನಿಯೋಗ ಭೇಟಿ
1 min read
ಟಿ ನರಸೀಪುರ: ಮೈಸೂರಿನ ಟಿ ನರಸೀಪುರ ನಗರದಲ್ಲಿ ಹನುಮ ಜಯಂತಿ ವಿಚಾರವಾಗಿ ದುಷ್ಕರ್ಮಿಗಳ ಕೃತ್ಯಕ್ಕೆ ಬಲಿಯಾದ ಯುವ ಬ್ರಿಗೇಡ್ ಕಾರ್ಯಕರ್ತ ವೇಣುಗೋಪಾಲ್ ನಾಯಕ್ ಅವರ ನಿವಾಸಕ್ಕೆ ಬಿಜೆಪಿ ನಿಯೋಗ ಭೇಟಿ ನೀಡಿದೆ.
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಮಾಜಿ ಸಚಿವ ಡಾ.ಅಶ್ವಥ್ ನಾರಾಯಣ್ ಅವರ ನೇತೃತ್ವದಲ್ಲಿ ರಾಜ್ಯ ಅರಣ್ಯ ವಸತಿ ಹಾಗೂ ವಿಹಾರಧಾಮಗಳ ಸಂಸ್ಥೆಯ ಮಾಜಿ ಅಧ್ಯಕ್ಷ ಎಂ.ಅಪ್ಪಣ್ಣನವರು ತೆರಳಿ ಅವರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಈ ವೇಳೆ ಹತ್ಯೆ ಮಾಡಲಾದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಕ್ರೂರವಾಗಿ ಕೊಂದಿರುವ ಆರೋಪಿಗಳಿಗೆ ಕಠಿಣ ಶಿಕ್ಷೆಗೆ ಆಗ್ರಹಿಸಲಾಯಿತು.

ಈ ಸಂದರ್ಭದಲ್ಲಿ ಶಾಸಕರಾದ ಶ್ರೀ ವತ್ಸ ಅವರು, ಮಾಜಿ ಶಾಸಕರಾದ ಶ್ರೀ ಎನ್.ಮಹೇಶ್ ಅವರು, ಟಿ.ನರಸೀಪುರದ ಬಿಜೆಪಿ ಪರಾಜಿತ ಅಭ್ಯರ್ಥಿ ಡಿ.ರೇವಣ್ಣನವರು, ಮೈಸೂರಿನ ಮಹಾನಗರ ಪಾಲಿಕೆ ಮೇಯರ್ ಶ್ರೀ ಶಿವಕುಮಾರ್ ಅವರು, ಬಿಜೆಪಿ ಜಿಲ್ಲಾಧ್ಯಕ್ಷರಾದ ಶ್ರೀಮತಿ ಮಂಜುಳಾ ಸೋಮಶೇಖರ್ ಅವರು,ಮಾಜಿ ಶಾಸಕರಾದ ಶ್ರೀ ಬಾಲರಾಜು ಅವರು, ಮುಖಂಡರಾದ ಶ್ರೀ ತಾಲ್ಲೂಕು ಬಿಜೆಪಿ ಅಧ್ಯಕ್ಷರಾದ ಶ್ರೀ ಲೋಕೇಶ್ ಅವರು, ಪ್ರಧಾನ ಕಾರ್ಯದರ್ಶಿ ಶ್ರೀ ರಂಗುನಾಯಕ್ ಅವರು, ಮಾಜಿ MLC ಶ್ರೀ ಮಲ್ಲಿಕಾರ್ಜುನಪ್ಪನವರು, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.