ದಸರಾಗೆ ಎಲ್ಲ ಸಿದ್ಧತೆ ನಡೆದಿದೆ: ಸಚಿವ ಎಸ್.ಟಿ.ಸೋಮಶೇಖರ್
1 min read
ಮೈಸೂರು,ಅ.1-ನಾಡಹಬ್ಬ ದಸರಾ ಮಹೋತ್ಸವದ ಎಲ್ಲ ಸಿದ್ಧತೆಗಳು ನಡೆದಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಸರಾಗೆ ಎಲ್ಲಾ ತಯಾರಿ ನಡೆದಿದೆ. ಸಾಂಸ್ಕೃತಿಕ ಕಾರ್ಯಕ್ರಮಗಳ ಪಟ್ಟಿ ಅಂತಿಮವಾಗಲಿದೆ. ಹಂಸಲೇಖ ಸೇರಿದಂತೆ ನಾಡಿನ ಹಲವು ಕಲಾವಿದರಿಗೆ ಕಾರ್ಯಕ್ರಮ ನೀಡಲಾಗುವುದು. ಉದ್ಘಾಟನೆಗೆ 500 ಹಾಗೂ ಜಂಬೂಸವಾರಿಗೆ 1,000 ಜನ ಎಂದು ತಜ್ಞರ ಸಮಿತಿ ಹೇಳಿದೆ. ಈ ಸಂಖ್ಯೆಯನ್ನು ಹೆಚ್ಚಿಸಲು ಕೇಳಿದ್ದೇನೆ ಎಂದರು.
ಚಾಮರಾಜನಗರಕ್ಕೆ ಸಿಎಂ ಬರುತ್ತಾರೆ. ಅ.6ರಂದೇ ಸಿಎಂ ಮೈಸೂರಿಗೆ ಬರುತ್ತಾರೆ. ಬಳಿಕ ದಸರಾ ಉದ್ಘಾಟನೆಯಲ್ಲಿ ಪಾಲ್ಗೊಳ್ಳುತ್ತಾರೆ. ನಂತರ ಏರ್ಪೋರ್ಟ್ನಲ್ಲಿ ರಾಷ್ಟ್ರಪತಿಗಳನ್ನು ಸ್ವಾಗತಿಸಿ ಚಾಮರಾಜನಗರ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ ಎಂದು ತಿಳಿಸಿದರು.
ರಾಜವಂಶಸ್ಥರಿಗೆ ನೀಡುವ ರಾಜಧನ ಕುರಿತು ಪ್ರತಿಕ್ರಿಯಿಸಿ ಪ್ರತಿ ವರ್ಷ ಎಷ್ಟು ಕೊಡುತ್ತೇವೆಯೋ ಅಷ್ಟೇ ಕೋಡುತ್ತೇವೆ. ನಿನ್ನೆ ಮುಖ್ಯಮಂತ್ರಿಗಳು 6 ಕೋಟಿ ರೂ. ಬಿಡುಗಡೆ ಮಾಡಿದ್ದಾರೆ. ಅದರಲ್ಲಿ ರಾಜಧನ ಇರಬಹುದು, ಬೇರೆ ಬೇರೆ ಇರಬಹುದು ಚಾಮರಾಜನಗರಕ್ಕೆ ಮತ್ತು ಮಂಡ್ಯ ಎಲ್ಲವನ್ನೂ ತೀರ್ಮಾನಿಸಲಾಗುವುದು ಎಂದರು.