ಬಿಳಿಕೆರೆ ಪೊಲೀಸರ ಕಾರ್ಯಾಚರಣೆ: ಆರೋಪಿ, ಅಕ್ರಮವಾಗಿ ಬೆಳೆದಿದ್ದ ಗಾಂಜಾ ಗಿಡ ವಶ
ಮೈಸೂರು: ಬಿಳಿಕೆರೆ ಪೊಲೀಸರ ಕಾರ್ಯಾಚರಣೆಯಲ್ಲಿ ಅಕ್ರಮವಾಗಿ ಬೆಳೆದಿದ್ದ ಗಾಂಜಾ ವಶಪಡಿಸಿಕೊಳ್ಳಲಾಗಿದೆ.
ಹುಣಸೂರು ತಾಲ್ಲೂಕು ವಡೆಯರಹೊಸಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಗ್ರಾಮದ ಕುಂಟ ಸಿಂಗ್ರಯ್ಯ ಮನೆಯ ಪಕ್ಕದ ಗಲ್ಲಿಯಲ್ಲಿ ಅಕ್ರಮವಾಗಿ ಗಾಂಜಾ ಗಿಡ ಬೆಳೆದಸಿದ್ದರು. ಅಕ್ರಮವಾಗಿ ಬೆಳೆದಿದ್ದ ಗಾಂಜಾ ಗಿಡ ವಶಕ್ಕೆ ಪಡೆಯಲಾಗಿದೆ. 5.8 ಕೆ.ಜಿ ತೂಕದ ಗಾಂಜಾ ಗಿಡ ಹಾಗೂ ಆರೋಪಿ ಕುಂಟ ಸಿಂಗ್ರಯ್ಯನನ್ನು ವಶಕ್ಕೆ ಪಡೆದಯಲಾಗಿದೆ. ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
