ಸೆ.26ರಿಂದ ದಸರಾ ವಸ್ತು ಪ್ರದರ್ಶನ ಪ್ರಾರಂಭ

1 min read

ಮೈಸೂರು: ಈ ಬಾರಿ ದಸರಾ ವಸ್ತು ಪ್ರದರ್ಶನ ಸೆ.26ರಿಂದ ಪ್ರಾರಂಭವಾಗಲಿದೆ ಅಂತ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಮಿರ್ಲೆ ಶ್ರೀನಿವಾಸಮೂರ್ತಿ ಮಾಹಿತಿ ನೀಡಿದ್ದಾರೆ.

ಇಂದು ಸುದ್ದಿಗೋಷ್ಟಿ ನಡೆಸಿ ಮಾಧ್ಯಮಗಳೊಂದಿಗೆ ಮಾತನಾಡಿದ ಮಿರ್ಲೆ ಶ್ರೀನಿವಾಸಮೂರ್ತಿ ಅವರು ವಸ್ತುಪ್ರದರ್ಶನ ಆವರಣದಲ್ಲಿ ವೆಜ್ ಅಂಡ್ ನಾನ್ ವೆಜ್ ಪ್ರತ್ಯೇಕ ಸ್ಟಾಲ್ ವ್ಯವಸ್ಥೆ ಮಾಡಲಾಗುವುದು. 6 ಮಂದಿ ಸ್ವಾತಂತ್ರ್ಯ ಹೋರಾಟಗಾರರ ಮರುಳಾಕೃತಿ ನಿರ್ಮಿಸಲಾಗುವುದು. ಆ 6 ಮಂದಿ ಸ್ವಾತಂತ್ರ್ಯ ಹೋರಾಟಗಾರರನ್ನ ಇನ್ನು ಆಯ್ಕೆ ಮಾಡಿಲ್ಲ ಎಂದರೆ.

ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಮಿರ್ಲೆ ಶ್ರೀನಿವಾಸಮೂರ್ತಿ

ವಿಶೇಷ ಕಾರ್ಯಕ್ರಮಗಳೊಂದಿಗೆ 90ದಿನಗಳ ಕಾಲ ವಸ್ತುಪ್ರದರ್ಶನ ಆಯೋಜನೆ. ಈ ಬಾರಿಯ ವಸ್ತುಪ್ರದರ್ಶನದಲ್ಲಿ ಪುನೀತ್ ರಾಜ್ ಕುಮಾರ್ ನೆನಪಿಗಾಗಿ 7 ಸ್ಯಾಂಡ್ ಮ್ಯೂಸಿಯಂ ಆಯೋಜನೆ. ಯೋಗ 3ಡಿ ವಿಡಿಯೋ ಮ್ಯಾಪಿಂಗ್.

ಕಾವೇರಿ ಬಹುಮಾಧ್ಯಮ ಕಲಾ ಗ್ಯಾಲರಿ ಉದ್ಘಾಟನೆ. ವಸ್ತುಪ್ರದರ್ಶನದ ಅವರಣವನ್ನ ಪ್ಲಾಸ್ಟಿಕ್ ಮುಕ್ತ ವಲಯ ಎಂದು ಘೋಷಣೆ ಹಿನ್ನೆಲೆ ಪ್ಲಾಸ್ಟಿಕ್ ಬಳಸುವಂತಿಲ್ಲ. ಪ್ಲಾಸ್ಟಿಕ್ ಒಳಕೆ ತಡೆಗಟ್ಟಲು ಪ್ರಾಧಿಕಾರದ ವತಿಯಿಂದಲೇ ಆರ್ ಓ ಪ್ಲಾಂಟ್ ಮೂಲಕ ಕುಡಿಯುವ ನೀರಿನ ವ್ಯವಸ್ಥೆ. ಎರಡು ವರ್ಷಗಳ ಕೋವಿಡ್ ಬಳಿಕ ನಡೆಯುತ್ತಿರುವ ಅದ್ದೂರಿ ವಸ್ತು ಪ್ರದರ್ಶನ. ಈ ಹಿನ್ನೆಲೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು, ನಗರದ ಜನತೆ ಆಗಮಿಸುವಂತೆ ಮಿರ್ಲೆ ಶ್ರೀನಿವಾಸ್ ಗೌಡ ಮನವಿ ಮಾಡಿದ್ದಾರೆ.

About Author

Leave a Reply

Your email address will not be published. Required fields are marked *