ಬಿಜೆಪಿಯವರು ಇಲ್ಲಿವರೆಗೆ ಕಡ್ಲೆಪುರಿ ತಿನ್ನುತ್ತಿದ್ರಾ..? ಸಿದ್ದರಾಮಯ್ಯ ಹೇಳಿಕೆ
1 min read
ಮೈಸೂರು: ಕಾಂಗ್ರೆಸ್ ಭ್ರಷ್ಟಾಚಾರದ ಕಡತ ತೆಗೆಯುತ್ತೇವೆ ಎಂಬ ಬಿಜೆಪಿ ನಾಯಕರ ಹೇಳಿಕೆ ವಿಚಾರಕ್ಕೆ ಸಂಭಂದಿಸಿದಂತೆ ಮಾಜಿ ಸಿಎಂ ಸಿದ್ದರಾಮಯ್ಯ ಮೈಸೂರಿನಲ್ಲಿ ಪ್ರತಿಕ್ರಿಯೆ ನೀಡಿದ್ದು ಬಿಜೆಪಿಯವರು ಇಲ್ಲಿವರೆಗೆ ಕಡ್ಲೆಪುರಿ ತಿನ್ನುತ್ತಿದ್ರಾ? ಅಂತ ಹೇಳಿದ್ದಾರೆ.
ಬಿಜೆಪಿ ಅಧಿಕಾರಕ್ಕೆ ಬಂದು ಎಷ್ಟು ವರ್ಷ ಆಯ್ತು. ಹಿಂದೆ 5 ವರ್ಷ ವಿರೋಧ ಪಕ್ಷದಲ್ಲಿ ಇರಲಿಲ್ಲವಾ. ಆಗ ಯಾಕೆ ಈ ಭ್ರಷ್ಟಾಚಾರದ ಮಾತು ಹೇಳಲಿಲ್ಲ. ಈಗ ನಾವು ನಿಮ್ಮ ಭ್ರಷ್ಟಾಚಾರದ ವಿರುದ್ಧ ಹೋರಾಟ ಮಾಡುತ್ತಿದ್ದೇವೆ. ಇಂತಹ ಸಂದರ್ಭದಲ್ಲಿ ಈ ಮಾತು ಹೇಳಿದರೆ ಜನ ನಂಬುತ್ತಾರ. ಭ್ರಷ್ಟಾಚಾರ ವಿಚಾರ ಗೊತ್ತಿದ್ದರೂ ಅದನ್ನ ಮುಚ್ಚಿಡುವುದೂ ಕೂಡ ಅಫೆನ್ಸ್. ಇದು ಸರ್ಕಾರಕ್ಕೆ ಗೊತ್ತಿಲ್ಲವಾ. ಜನರಿಗೆ ಇದೆಲ್ಲವೂ ಅರ್ಥವಾಗುತ್ತಿದೆ ಅಂತ ಹೇಳಿದರು.
ಪಿಎಸ್ಐ ನೇಮಕಾತಿಯಲ್ಲಿ ಅಕ್ರಮ ವಿಚಾರ: ಅಕ್ರಮ ನಡೆದಿದೆ ಎಂದು ನನ್ನ ಬಳಿ ಕೂಡ ಬಂದು ಹೇಳಿದ್ರು. ನಾನು ಸಂಬಂಧಪಟ್ಟವರಿಗೆ ತನಿಖೆಗೆ ಹೇಳಿದ್ದೆ. ತನಿಖೆ ನಡೆಯುತ್ತಿದೆ, ಯಾರು ತಪ್ಪಿತಸ್ಥರಿದ್ದಾರೆ ಶಿಕ್ಷೆಯಾಗಲಿ ಎಂದರು.
ಮಠಕ್ಕೆ ನೀಡುವ ಅನುದಾನ ಪಡೆಯಲು ಕಮಿಷನ್ ಕೊಡಬೇಕು ವಿಚಾರ, ದಿಂಗಾಲೇಶ್ವರ ಸ್ವಾಮೀಜಿ ಹೇಳಿಕೆ ಹಿನ್ನೆಲೆ ಅದರ ಬಗ್ಗೆ ನನಗೇನು ಗೊತ್ತಿಲ್ಲ ಅಂತ ಮೈಸೂರಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.