ಪ್ರತಿಯೊಂದು ಪೆಟ್ರೋಲ್ ಬಂಕ್ ಸ್ಟೇಷನ್ ಹತ್ತಿರ ಚಾರ್ಜಿಂಗ್ ಕೇಂದ್ರ ತೆರೆಯುವಂತೆ ಶಾಸಕ ಜಿಟಿಡಿ ಮನವಿ
1 min read
ಮೈಸೂರು: ಪ್ರತಿಯೊಂದು ಪೆಟ್ರೋಲ್ ಬಂಕ್ ಸ್ಟೇಷನ್ ಹತ್ತಿರ ಚಾರ್ಜಿಂಗ್ ಕೇಂದ್ರಗಳನ್ನು ತೆರೆಯುವಂತೆ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಜಿ ಟಿ ದೇವೇಗೌಡರು ಇಂಧನ ಸಚಿವರಲ್ಲಿ ಮನವಿ ಮಾಡಿದರು.
ಇಂದು ಕಡಕೋಳದ KEBEA ತರಬೇತಿ ಕೇಂದ್ರದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ವಿದ್ಯುತ್ ಚಾಲಿತ ವಾಹನಗಳ ಚಾರ್ಜಿಂಗ್ ಕೇಂದ್ರ ಹಾಗೂ ಚಾರ್ಜಿಂಗ್ ತಂತ್ರಜ್ಞಾನಗಳ ಕುರಿತ ವಿಚಾರ ಸಂಕಿರಣ ವನ್ನು ಉದ್ಘಾಟಿಸಿ ಮಾತಾಡಿದರು…ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೆ ಇ ಬಿ ಸ್ಟೇಷನ್ ಗಳ ಕೊರತೆ ಇದ್ದು, ಶೀಘ್ರವಾಗಿ ಸ್ಟೇಷನ್ ಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳುವಂತೆ ತಿಳಿಸಿದರು.
ಈ ಹಿಂದೆ ಹುಣಸೂರು ಕ್ಷೇತ್ರದ ಶಾಸಕನಾಗಿ ನಾಲ್ಕು ಹೋಬಳಿಗಳಲ್ಲಿ ನಾಲ್ಕು ಸ್ಟೇಷನ್ ಗಳನ್ನು ಸ್ಥಾಪಿಸಲಾಗಿ, ಪ್ರಸ್ತುತ ಆ ಭಾಗದ ರೈತರಿಗೆ ಹಾಗೂ ನಿವಾಸಿಗಳಿಗೆ ವಿದ್ಯುತ್ ಸಮರ್ಪಕವಾಗಿ ಸರಬರಾಜಗುತ್ತಿರುವುದನ್ನು ಸ್ಮರಿಸಿದರು ನಂತರ ಲೈನ್ ಮೆನ್ ಗಳ ಕೊರತೆ ಇರುವುದರಿಂದ ಶೀಘ್ರವಾಗಿ 25 ಲೈನ್ ಮೆನ್ ಗಳನ್ನು ಒದಗಿಸಿಕೊಡುವಂತೆ ಕೋರಿದರು.
ಮುಂದುವರೆದು ಇತ್ತೀಚಿನ ದಿನಗಳಲ್ಲಿ ನಗರಸಭೆ, ಪಟ್ಟಣ ಪಂಚಾಯತಿಗಳಲ್ಲಿ ವಿದ್ಯುತ್ ಬಿಲ್ ಪಾವತಿಸದ ಕಾರಣ ವಿದ್ಯುತ್ ಕಡಿತಗೊಳಿಸಿರುವುದರಿಂದ ಆ ಭಾಗದ ಸ್ಥಳೀಯ ನಿವಾಸಿಗಳು ಕತ್ತಲೆ ಯಲ್ಲಿ ವಾಸಿಸುವಂತ ಸ್ಥಿತಿ ನಿರ್ಮಾಣವಾಗಿರುವುದರಿಂದ, ನಾನು ಈಗಾಗಲೇ ಪೌರಾಡಳಿತ ಸಚಿವರು, ಪೌರಾಡಳಿತ ನಿರ್ದೇಶಕರಿಗೆ ಮಾತನಾಡಿದ್ದು, ಹಣವನ್ನು ಬಿಡುಗಡೆ ಮಾಡುವುದಾಗಿ ತಿಸಿರುವುದರಿಂದ, ಸರ್ಕಾರಿ ಕಚೇರಿಗಳು ವಿದ್ಯುತ್ ಬಿಲ್ಲನ್ನು ಬಾಕಿ ಉಳಿಸಿಕೊಂಡಿದ್ದಲ್ಲಿ ಸಂಬಂಧಪಟ್ಟವರಿಗೆ ತಿಳುವಳಿಕೆ ನೋಟೀಸ್ ನೀಡಿ ಕನಿಷ್ಠ ಒಂದು ತಿಂಗಳು ಕಾಲಾವಕಾಶ ನೀಡುವಂತೆ ಸಚಿವರಲ್ಲಿ ಮನವಿ ಮಾಡಿದರು.