ವಿದ್ಯಾರ್ಥಿಗಳಿಗೆ ಕಾರು ಡಿಕ್ಕಿ: ಅಪಘಾತದ ಭೀಕರ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ

1 min read

ಮಂಡ್ಯ: ಕಾರು ಡಿಕ್ಕಿಯಾಗಿ ಇಬ್ಬರು ಗಾಯಗೊಂಡು ಒಬ್ಬ ಚಿಂತಾಜನಕ ಸ್ಥಿತಿ ತಲುಪಿದ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿಯಲ್ಲಿ ನಡೆದಿದೆ. ಈ ಅಪಘಾತದ ಭೀಕರ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

https://www.instagram.com/p/CX3Lm0TtCAZ/?utm_source=ig_web_copy_link

ಹುಟ್ಟುಹಬ್ಬದ ದಿನವೇ‌ ಅಪಘಾತದಿಂದ ಚಿಂತಾಜನಕ ಸ್ಥಿತಿಗೆ ತಲುಪಿದ್ದ ವಿದ್ಯಾರ್ಥಿ ಶರತ್(19) ಸಾವು ಬದುಕಿನ ನಡುವ ಹೋರಾಟ ನಡೆಸುತ್ತಿದ್ದಾನೆ. ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿಗಳಿಗೆ ಕಾರು ಡಿಕ್ಕಿ ಹೊಡೆದಿದೆ. ಶಶಾಂಕ್, ಸುದರ್ಶನ್ ಎಂಬುವರಿಗೆ ಗಂಭೀರ ಗಾಯಗಳಾಗಿವೆ.

ಇನ್ನು ಗಾಯಗೊಂಡಿರುವ ಇಬ್ಬರು ವಿದ್ಯಾರ್ಥಿಗಳ ಸ್ಥಿತಿ ಚೇತರಿಕೆ ಕಾಣುತ್ತಿದೆ. ಈ ವಿದ್ಯಾರ್ಥಿಗಳು ಶಾಂತಿ ಕಾಲೇಜಿನಲ್ಲಿ ಪ್ರಥಮ ಬಿಕಾಂ ವ್ಯಾಸಂಗ ಮಾಡ್ತಿದ್ದರು. ಘಟನೆ ನಡೆಯುತ್ತಿದ್ದಂತೆ ಕಾರು ಚಾಲನೆ ಮಾಡ್ತಿದ್ದ ವ್ಯಕ್ತಿ ಸ್ಥಳದಿಂದ ಪರಾರಿಯಾಗಿದ್ದಾನೆ.

ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿರುವ ಶರತ್ ಮಳವಳ್ಳಿ ತಾಲ್ಲೂಕಿನ ರಾಗಿಬೊಮ್ಮನಹಳ್ಳಿ ಗ್ರಾಮದ ವಿದ್ಯಾರ್ಥಿಯಾಗಿದ್ದು ಮಳವಳ್ಳಿ ಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಡೆಡ್ಲಿ ಆಕ್ಸಿಡೆಂಟ್ ವೀಡಿಯೋ ಸಿಸಿ ಕ್ಯಾಮೆರಾ ದಲ್ಲಿ ಸೆರೆಯಾಗಿದೆ.

About Author

Leave a Reply

Your email address will not be published. Required fields are marked *