ಸಂಸದ ಪ್ರತಾಪ್ ಸಿಂಹ ಕಾರು ಅಪಘಾತ ಸುಳ್ಳು ಸುದ್ದಿ! ಸ್ಪಷ್ಟನೆ ನೀಡಿದ ಸಂಸದರು
1 min read
ರಾಮನಗರ: ಮೈಸೂರು ಸಂಸದ ಪ್ರತಾಪ್ ಸಿಂಹ ಕಾರು ಅಪಘಾತವಾಗಿದೆ ಎಂಬ ಸುದ್ದಿ ಎಲ್ಲೆಡೆ ಹರಿದಾಡಿತ್ತು. ಈ ಬಗ್ಗೆ ಪ್ರತಾಪ್ ಸಿಂಹ ಅವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಸ್ಪಷ್ಟನೆ ನೀಡಿದ್ದು ನನ್ನ ಕಾರು ಅಪಘಾತಕ್ಕೊಳಗಾಗಿಲ್ಲ ಎಂದು ತಿಳಿಸಿದ್ದಾರೆ.
ಮೈಸೂರಿನಿಂದ ಬೆಂಗಳೂರಿಗೆ ಕಾರ್ಯ ನಿಮಿತ್ತ ತೆರಳುತ್ತಿದ್ದಂತ ಸಂಸದ ಪ್ರತಾಪ್ ಸಿಂಹ ಕಾರು, ಪಲ್ಟಿಯಾಗಿದೆ ಕಾರು ಪಲ್ಟಿಯಾಗಿದ್ದರಿಂದ ಚಾಲಕ ಮಾತ್ರ ಗಾಯಗೊಂಡು, ಮಿಕ್ಕವರು ಪ್ರಣಾಪಾಯದಿಂದ ಪಾರಾಗಿಗಿದ್ದರು ಎಂಬ ಸುದ್ದಿ ಹರಡಿತ್ತು. ನನಗೆ ಆಗಲಿ ಅಥವಾ ನನ್ನ ಕುಟುಂಬದವರಿಗೆ ಯಾವುದೇ ಅಪಘಾತ ಸಂಭವಿಸಿಲ್ಲ. ಹೆದ್ದಾರಿಯಲ್ಲಿ ಅಪಘಾತವಾಗಿದ್ದು ನಿಜ, ಆದರೆ, ಆ ಕಾರಿನಲ್ಲಿ ನಾನಾಗಲಿ ನನ್ನ ಕುಟುಂಬದವರಾಗಲಿ ಇರಲಿಲ್ಲ. ಮೈಸೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದೆ ಮಾರ್ಗ ಮಧ್ಯದಲ್ಲಿ ಹೋಟೆಲ್ ನಲ್ಲಿ ಊಟ ಮಾಡುತ್ತಿದ್ದ ಸಮಯದಲ್ಲಿ ಹೋಟೆಲ್ ಮುಂದೆ ಇರುವ ಹೆದ್ದಾರಿಯಲ್ಲಿ ಕಾರು ಪಲ್ಟಿಯಾಗಿದ್ದು ಕಂಡು ಬಂದಿತು. ಬೆಂಗಳೂರಿಗೆ ತೆರಳುತ್ತಿದ್ದ ಇನ್ನೋವಾ ಕಾರಿನ ಚಕ್ರ ಸ್ಫೋಟಗೊಂಡು ಪಲ್ಟಿಯಾಗಿತ್ತು ಅಂತ ಪ್ರತಾಪ್ ಸಿಂಹ ಅವರು ತಿಳಿಸಿದ್ದಾರೆ..
ಕಾರಿನಲ್ಲಿ ಗಂಡ, ಹೆಂಡತಿ, ಮಗಳು, ಚಾಲಕ ಸೇರಿ 6 ಜನರಿದ್ದರು. ಅದೃಷ್ಟವಶಾತ್ ಕಾರಿನಲ್ಲಿದ್ದ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅತೀ ವೇಗವಾಗಿ ಬಂದ ಕಾರು ಪಲ್ಟಿ ಹೊಡೆದಿದೆ. ಹಾಗೂ ಕಾರು ಚಾಲಕನಿಗೆ ಗಾಯಗಳಾಗಿದ್ದು, ಸಮೀಪದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಅದೃಷ್ಟವಶಾತ್ ಯಾರಿಗೂ ತೀವ್ರ ನೋವು, ಗಾಯಗಳಾಗಿಲ್ಲ, ನಾನು ನನ್ನ ಗನ್ ಮ್ಯಾನ್ ತಕ್ಷಣವೆ ನೆರವಿಗೆ ಧಾವಿಸಿದೆವು. ಸ್ಥಳಕ್ಕೆ ಟ್ರಾಫಿಕ್ ಪೊಲೀಸರು ಬಂದು ನೆರವಾದರು ಎಂದು ತಿಳಿಸಿದ್ದಾರೆ.