ಕಾಲೇಜಿನಲ್ಲಿ ಯಾರು ಹಿಜಾಬ್, ಕೇಸರಿ ಶಾಲು ಧರಿಸುವಂತಿಲ್ಲ: ಗೃಹ ಸಚಿವ ಆರಗ ಜ್ಞಾನೇಂದ್ರ

1 min read

ಶಿವಮೊಗ್ಗ,ಫೆ.7-ಕಾಲೇಜು ಆವರಣದಲ್ಲಿ ಯಾರು ಕೂಡ ಹಿಜಾಬ್, ಕೇಸರಿ ಶಾಲು ಧರಿಸುವಂತಿಲ್ಲ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.


ಶಿವಮೊಗ್ಗದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಲೇಜು ಅಡಳಿತ ಮಂಡಳಿ ನಿರ್ಧಾರ ಮಾಡಿರುವ ಸಮವಸ್ತ್ರವನ್ನೇ ಎಲ್ಲರೂ ಧರಿಸಬೇಕು. ಈ ಬಗ್ಗೆ ಸಂಬಂಧಪಟ್ಟ ಇಲಾಖೆ ಆದೇಶ ಹೊರಡಿಸಿದ್ದು, ಇದನ್ನು ಎಲ್ಲರೂ ಪಾಲನೆ ಮಾಡಬೇಕು ಎಂದು ಹೇಳಿದರು.


ಧರ್ಮವನ್ನು ಮೀರಿ ಭಾರತ ಮಾತೆಯ ಮಕ್ಕಳು ಎನ್ನುವ ಮನೋಭಾವನೆಯನ್ನು ನಾವು ಮಕ್ಕಳಲ್ಲಿ ತುಂಬಬೇಕು. ಈ ನಿಟ್ಟಿನಲ್ಲಿ ಯೂನಿಫಾರಂ ಸಮಾನತೆಯ ಸಂಕೇತ ಶಾಲಾ ಕಾಲೇಜುಗಳಲ್ಲಿ ಸಮಾನತೆ ಸಾರುವ ಕೆಲಸ ಆಗಬೇಕು ಎಂದರು.


ಈ ಹಿಂದೆ ಹಿಜಾಬ್‌ಗೆ ಧರಿಸುವಿಕೆ ಬಗ್ಗೆ ಈ ಮಟ್ಟಿನ ಒಲವು ಇರಿಲಿಲ್ಲ. ಈಗ ಮಕ್ಕಳು ಕಡ್ಡಾಯವಾಗಿ ನಾವು ಹಿಜಾಬ್ ಧರಿಸಿ ಬರುತ್ತೇವೆ ಅಂತ ಹೇಳುತ್ತಿರುವುದು ಅನುಮಾನಿಗಳಿಗೆ ಕಾರಣವಾಗಿದೆ. ಇದರ ಹಿಂದೆ ಯಾರಿದ್ದಾರೆ ಎನ್ನುವುದನ್ನು ಕಂಡು ಹಿಡಿಯುವ ಸಲುವಾಗಿ ತನಿಖೆ ನಡೆಸಲು ಪೋಲಿಸರಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.

About Author

Leave a Reply

Your email address will not be published. Required fields are marked *