ರೇಣುಕಾಚಾರ್ಯ ಕುಟುಂಬದ 62 ಜನರಿಂದ ನೇತ್ರದಾನಕ್ಕೆ‌ ನಿರ್ಧಾರ.!

1 min read

ನಮ್ಮೆಲ್ಲರ ನೆಚ್ಚಿನ ಪುನೀತ್ ರಾಜ್​ಕುಮಾರ್​ಗಾಗಿ ದಾವಣಗೆರೆ ಜಿಲ್ಲೆಯ ಹೊನ್ನಾಳಿ ಪಟ್ಟಣದಲ್ಲಿ ಅಪ್ಪುಗೆ ನುಡಿನಮನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಹೊನ್ನಾಳಿ ಪಟ್ಟಣದಲ್ಲಿ ತಡರಾತ್ರಿವರೆಗು ನುಡಿನಮನ ಕಾರ್ಯಕ್ರಮ ನಡೆಯಿತು.

ಈ ಕಾರ್ಯಕ್ರಮದಲ್ಲಿ ವಿಶೇಷವಾಗಿ ತಮ್ಮ ಮಧುರ ಸಂಗೀತದ ಮೂಲಕ ಗಾಯಕ ರಾಜೇಶ್ ಕೃಷ್ಣನ್, ಅಪ್ಪುಗೆ ನುಡಿನಮನ ಸಲ್ಲಿಸಿದರು. ಶಾಸಕ ಎಂ.ಪಿ. ರೇಣುಕಾಚಾರ್ಯ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಪುನೀತ್ ನುಡಿನಮನ‌ ಕಾರ್ಯಕ್ರಮದಲ್ಲಿ ರೇಣುಕಾಚಾರ್ಯ ಕುಟುಂಬದ 62 ಜನರು ನೇತ್ರದಾನಕ್ಕೆ‌ ನಿರ್ಧಾರ ಮಾಡಿದರು.

ಜೊತೆಗೆ ಶಾಸಕರಿಗೆ ಅವಳಿ ತಾಲೂಕಿನ 500 ಜನರು‌ ಸಾಥ್ ನೀಡಿದ್ದು, ನೇತ್ರದಾನಕ್ಕೆ ಕೈಜೋಡಿಸಿದ್ದಾರೆ.‌ ಈಗಾಗಲೇ ಮರಣೋತ್ತರವಾಗಿ ನೇತ್ರದಾನ ಮಾಡಲು ರೇಣುಕಾಚಾರ್ಯ ಕುಟುಂಬ ಶಿವಮೊಗ್ಗ ಮೂಲದ ಶಂಕರ ಕಣ್ಣಿನ ಆಸ್ಪತ್ರೆಯಲ್ಲಿ ನೋಂದಣಿ ಮಾಡಿಸಿದ್ದಾರೆ. ಶಾಸಕರ ಅವಿಭಕ್ತ ಕುಟುಂಬದಲ್ಲಿ ಒಟ್ಟು 62 ಜನರಿದ್ದಾರೆ. ಈ 62 ಮಂದಿ ನೇತ್ರದಾನ ಮಾಡಲು ನೋಂದಣಿ ಮಾಡಿಸಿದ್ದಾರೆ ಎಂದು ರೇಣುಕಾರ್ಚಾರ್ಯರ ಪತ್ನಿ ಸುಮಾ ತಿಳಿಸಿದ್ದಾರೆ.

About Author

Leave a Reply

Your email address will not be published. Required fields are marked *