ಬಿ.ಎಸ್. ಹರೀಶ್ ಅವರಿಗೆ ಶ್ರೀ ಶಿವರಾತ್ರಿಶ್ವರ ಮಾಧ್ಯಮ ಪ್ರಶಸ್ತಿ ಪುರಸ್ಕಾರ
1 min read
ಮೈಸೂರು: ಸುತ್ತೂರು ಶ್ರೀ ಮಠವು ಕೊಡ ಮಾಡುವ 2020 ನೇ ಸಾಲಿನ ಶ್ರೀ ಶಿವರಾತ್ರೀಶ್ವರ ಮಾಧ್ಯಮ ಪ್ರಶಸ್ತಿಗೆ ಹಿರಿಯ ಪತ್ರಕರ್ತ ಶ್ರೀ ಬಿ. ಎಸ್. ಹರೀಶ್ ಅವರು ಭಾಜನರಾಗಿದ್ದಾರೆ.
ಆಂದೋಲನ, ಪ್ರಜಾನುಡಿ, ಉಷಾಕಿರಣ, ವಿಜಯ ಕರ್ನಾಟಕ, ವಿಜಯವಾಣಿ ಪತ್ರಿಕೆಗಳಲ್ಲಿ ಸುಮಾರು ನಾಲ್ಕು ದಶಕಗಳಿಗೂ ಅಧಿಕ ಕಾಲ ಕಾರ್ಯನಿರ್ವಹಿಸಿರುವ ಬಿ.ಎಸ್.ಹರೀಶ್ ಅವರ ಸೇವೆಯನ್ನು ಪರಿಗಣಿಸಿ ಶ್ರೀ ಮಠವು ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಿದೆ ಎಂದು ಜಿಲ್ಲಾ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಎಂ.ಸುಬ್ರಹ್ಮಣ್ಯ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಪ್ರಶಸ್ತಿ ಪ್ರದಾನ: ಜಿಲ್ಲಾ ಪತ್ರಕರ್ತರ ಸಂಘದ ಸಭಾಂಗಣದಲ್ಲಿ ತಾ.18 ರಂದು(ಸೋಮವಾರ) ಬೆಳಗ್ಗೆ 10 ಗಂಟೆಗೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ. ಮುಖ್ಯ ಅತಿಥಿಗಳಾಗಿ ಕೃಷ್ಣರಾಜ ಕ್ಷೇತ್ರದ ಶಾಸಕ ಶ್ರೀ ಎಸ್.ಎ. ರಾಮದಾಸ್, ಸಾಹಿತಿ ಶ್ರೀ ಹಿ.ಶಿ.ರಾಮಚಂದ್ರೇಗೌಡ, ಜೆಎಸ್ ಎಸ್ ಮಹಾವಿದ್ಯಾಪೀಠದ ಸಾಮಾನ್ಯ ಆಡಳಿತ ವಿಭಾಗದ ನಿರ್ದೇಶಕರಾದ ಶ್ರೀ ಶಂಕರಪ್ಪ ಹಾಗೂ ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶ್ರೀ ಎಸ್.ಟಿ.ರವಿಕುಮಾರ್ ಪಾಲ್ಗೊಳ್ಳುವರು ಎಂದು ತಿಳಿಸಿದ್ದಾರೆ.