ಒಂದು ಧರ್ಮ, ಒಂದು ಜಾತಿ ಟಾರ್ಗೆಟ್ ಮಾಡಬೇಡಿ: ಸಿದ್ದರಾಮಯ್ಯ
1 min read
ಟಿ. ನರಸೀಪುರ: ಬಿಬಿಎಂಪಿ ವ್ಯಾಪ್ತಿಯಲ್ಲಿ ಮುಸ್ಲಿಂಮರ ಮಟನ್ ಸ್ಟಾಲ್, ಕಸಾಯಿಖಾನೆ ಮುಚ್ಚಲು ನೋಟಿಸ್ ಕೊಟ್ಟಿರುವ ವಿಚಾರ. ಕೇವಲ ಮುಸ್ಲೀಮರನ್ನೇ ಯಾಕೆ ಟಾರ್ಗೆಟ್ ಮಾಡ್ತಿರಾ. ಒಂದು ಧರ್ಮ, ಒಂದು ಜಾತಿ ಟಾರ್ಗೆಟ್ ಮಾಡಬೇಡಿ. ಎಲ್ಲರ ಮೇಲೂ ಕಾನೂನು ಕ್ರಮ ಕೈಗೊಳ್ಳುವಂತಿದ್ದರೆ ಮಾಡಿ ಅಂತ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ಮೈಸೂರಿನ ಟಿ ನರಸೀಪುರದಲ್ಲಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ ಅವರು ಕಾನೂನು ಎಲ್ಲರಿಗೂ ಒಂದೇ. ರಾಜಕೀಯ ಲಾಭಕ್ಕಾಗಿ ಒಂದು ಧರ್ಮವನ್ನ ಟಾರ್ಗೆಟ್ ಮಾಡಬೇಡಿ. ಮುಸ್ಲಿಂ, ಕ್ರಿಶ್ಚಿಯನ್, ಹಿಂದೂ ಯಾರೆ ತಪ್ಪು ಮಾಡಿದ್ರು ಕ್ರಮ ತಗೊಳ್ಳಿ.
ಒಂದು ವರ್ಗವನ್ನ ಟಾರ್ಗೆಟ್ ಮಾಡಿದರೆ ಮತ ದೃವೀಕರಣ ಆಗತ್ತೆ ಎಂಬ ಭ್ರಮೆಯಲ್ಲಿ ಬಿಜೆಪಿ ಇದೆ. ಅದು ಅಸಾಧ್ಯ. ಈಗಾಗಲೇ ಅವರಿಗೆ ತಿರುಗುಬಾಣ ಆಗಿದೆ. ಹಿಂದಿ ರಾಷ್ಟ್ರ ಭಾಷೆ ಚರ್ಚೆ ವಿಚಾರ. ಸಂವಿಧಾನ 15 ಭಾಷೆಗಳಿಗೆ ಅಧಿಕೃತ ಭಾಷೆ ಎಂಬ ಮಾನ್ಯತೆ ನೀಡಿದೆ.
ಹಿಂದಿ ಕೂಡ ಒಂದು ಭಾಷೆ. ಹಿಂದಿ ರಾಷ್ಟ್ರ ಭಾಷೆ ಅಂತ ಎಲ್ಲಿಯೂ ಹೇಳಿಲ್ಲ. ಅಮಿತ್ ಷಾ ಅವರು ಹಿಂದಿಯನ್ನು ಸಂಪರ್ಕ ಭಾಷೆಯಾಗಿ ಬಳಸಬೇಕು ಅಂದಿರುವ ಕಾರಣಕ್ಕಾಗಿ ಬಿಜೆಪಿಯವರು ಓಲೈಕೆ ಮಾಡುತ್ತಿದ್ದಾರೆ.
ಸಿದ್ದರಾಮಯ್ಯ ಸೋನಿಯಾ ಗಾಂಧಿ ಗುಲಾಮ ಎಂಬ ಸಿ.ಟಿ. ರವಿ ಹೇಳಿಕೆ ವಿಚಾರ. ಪ್ರಜಾಪ್ರಭುತ್ವದಲ್ಲಿ ಯಾರು ಯಾರಿಗೂ ಗುಲಾಮರಲ್ಲ. ಅಮಿತ್ ಷಾ ಓಲೈಸಿ ಮಾತನಾಡಿದ್ದಕ್ಕೆ ಸಿಟಿ.ರವಿಯನ್ನ ಗುಲಾಮ ಎಂದಿದ್ದು. ಸೋನಿಯಾ ಗಾಂಧಿ ಹಿಂದಿ ರಾಷ್ಟ್ರೀಯ ಭಾಷೆ ಅಂದಿದ್ದಾರಾ ? ರಾಹುಲ್ ಗಾಂಧಿ ಆ ರೀತಿ ಮಾತನಾಡಿದ್ದಾರಾ ಪ್ರಜಾಪ್ರಭುತ್ವದಲ್ಲಿ ಯಾರಿಗೆ ಯಾರೂ ಗುಲಾಮರಲ್ಲ.
ಭ್ರಷ್ಟಾಚಾರದ ಬಗ್ಗೆ ಮಾತನಾಡಲು ಕಾಂಗ್ರೆಸ್ಗೆ ನೈತಿಕತೆ ಇಲ್ಲ ಎಂಬ ಸಚಿವ ಅಶೋಕ್ ಹೇಳಿಕೆ ವಿಚಾರ ಟೀಕೆ. ನಮ್ಮ ಸರ್ಕಾರ ಇದ್ದಾಗ ಅಶೋಕ ಏನ್ ಮಾಡ್ತಾ ಇದ್ದರು. ಆಗ ಬಿಜೆಪಿ ಪ್ರತಿಪಕ್ಷದಲ್ಲಿತ್ತು. ಆಗ ಯಾಕೆ ಭ್ರಷ್ಟಾಚಾರದ ಬಗ್ಗೆ ಮಾತನಾಡಲಿಲ್ಲ. ಆಗ ಅಶೋಕ ತಮ್ನ ಬಾಯಿಗೆ ಕಡುಬು ಹಾಕಿಕೊಂಡಿದ್ದರೇ?
ಸುಮ್ನೆ ಏನೇನೋ ಮಾತಾಡೋದಲ್ಲ. ನಮ್ಮ ಕಾಲದಲ್ಲೂ ಪಿಎಸ್ಐ ನೇಮಕಾತಿ ಆಯ್ತು. ಬೇರೆ ಬೇರೆ ನೇಮಕಾತಿಗಳಾದವು. ಆಗೆಲ್ಲ ಇಂತಹ ಭ್ರಷ್ಟಾಚಾರ ನಡೆದಿತ್ತ ? ಬಿಜೆಪಿಯವರು ಅಧಿಕಾರಕ್ಕೆ ಬಂದ ಮೇಲೆ ಭ್ರಷ್ಟಾಚಾರ, ಅಕ್ರಮಗಳು ಹೆಚ್ಚಾಗಿವೆ.
ಪಿಎಸ್ಐ ಮರು ಪರೀಕ್ಷೆ ನಡೆಸುವ ಸರ್ಕಾರದ ನಿರ್ಧಾರಕ್ಕೆ ಬೆಂಬಲ ಇದೆ. ಪರಿಕ್ಷೆಯಲ್ಲಿ ಯಾರು ಅಕ್ರಮ ಮಾಡಿದ್ದಾರೆ, ಯಾರು ಸರಿಯಾಗಿ ಬರೆದಿದ್ದಾರೆ ಗೊತ್ತಾಗಲ್ಲ. ತನಿಖೆ ಮುಂದುವರಿದು 20 ಜನರ ಬಂಧನ ಆಗಿದೆ. ಹೀಗಾಗಿ ಮರು ಪರೀಕ್ಷೆ ಮಾಡುವುದು ಸರಿ ಇದೆ.
ಆದರೆ ಈಗ ಪರೀಕ್ಷೆ ಬರೆದಿರುವ ಯಾರ ಬಳಿಯೂ ಪರಿಕ್ಷಾ ಶುಲ್ಕ ಪಡೆಯಬಾರದು. ಬಿಜೆಪಿ ದುರಾಡಳಿತದಿಂದ ಇಂತಹ ಘಟನೆಗಳು ಮರುಕಳಿಸುತ್ತಿವೆ. ಗೃಹ ಸಚಿವ ಆರಗ ಜ್ಞಾನೇಂದ್ರ ಒಂದು ಕ್ಷಣವೂ ಪದವಿಯಲ್ಲಿ ಮುಂದುವರಿಯಬಾರದು.
ಮುಖ್ಯಮಂತ್ರಿ ಇದರ ಬಗ್ಗೆ ಜವಾಬ್ದಾರಿ ತೆಗೆದುಕೊಳ್ಳಬೇಕು. ದಿವ್ಯಾ ಬಂಧನವಾದ ಕೂಡಲೇ ಎಕ್ಸಾಂ ರದ್ದು ವಿಚಾರ. ಬಂಧಿತೆ ದಿವ್ಯಾ ಸತ್ಯ ಹೇಳಲೇಬೇಕಲ್ವಾ. ಬೇರೆ ಯಾರ್ಯಾರು ಅಕ್ರಮದ ಹಿಂದೆ ಇದ್ದಾರೆ, ಯಾರಿಂದ ಪ್ರಶ್ನೆ ಪತ್ರಿಕೆ ಲೀಕ್ ಆಯ್ತು ಎಲ್ಲಾ ಗೊತ್ತಾಗಬೇಕಲ್ವ.
ಅದಕ್ಕೆ ತನಿಖೆ ಆಗಲೇಬೇಕು.
ಪ್ರಿಯಾಂಕ ಖರ್ಗೆಗೆ ನೋಟೀಸ್ ನೀಡುವ ಅಗತ್ಯವಿರಲಿಲ್ಲ. ನಿಮ್ಮ ಬಳಿ ಏನ್ ದಾಖಲೆ ಇದಾವೆ ಕೊಡಿ ಅಂತ ಕೇಳಬಹುದಿತ್ತು.
ಪ್ರಕರಣ ಸಂಬಂಧ ತನಿಖಾಧಿಕಾರಿಗಳು ಸಾಕ್ಷ್ಯ ಸಂಗ್ರಹಿಸಬೇಕು. ಅದನ್ನ ಬಿಟ್ಟು ನೋಟೀಸ್ ಯಾಕೆ ಕೊಡಬೇಕು.
ಹೇಳೇ ಮೈಸೂರು ಭಾಗದ ಮೇಲೆ ಬಿಜೆಪಿ ಕಣ್ಣು. ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಲೇವಡಿ. ಪಶ್ಚಿಮ ಬಂಗಾಳದ ಮೇಲೂ ಇದೇ ರೀತಿ ನಿರೀಕ್ಷೆ ಇಟ್ಟುಕೊಂಡಿದ್ರು, ಆದ್ರೆ ಏನಾಯ್ತು ? ಇಲ್ಲೂ ಅದೇ ರೀತಿ ಆಗಲಿದೆ. ನನಗೆ ಕ್ಷೇತ್ರ ಇಲ್ಲ ಅಂತಲ್ಲ. ಬಾದಾಮಿ ಇಲ್ವ, ಅಲ್ಲಿಂದಲೇ ಮತ್ತೆ ಸ್ಪರ್ಧಿಸಿದ್ರೂ ಸ್ಪರ್ಧಿಸಬಹುದು.
ಸುಮಾರು 20 ಕ್ಷೇತ್ರಗಳಲ್ಲಿ ಜನ ಕರೆಯುತ್ತಿದ್ದಾರೆ. ವರುಣ, ಚಾಮುಂಡೇಶ್ವರಿ, ಹುಣಸೂರು, ಹೆಬ್ಬಾಳ, ಚಾಮರಾಜಪೇಟೆ, ಕೋಲಾರ ಎಲ್ಲ ಕಡೆ ಕರೆಯುತ್ತಿದ್ದಾರೆ. ಚುನಾವಣೆಗೆ ತುಂಬಾ ದಿನ ಇದೆ. ಹತ್ತಿರ ಬಂದಾಗ ಸೂಕ್ತ ತೀರ್ಮಾನ ತೆಗೆದುಕೊಳ್ಳುತ್ತೇನೆ.