ಜೆಡಿಎಸ್‌ಗೆ ಟಕ್ಕರ್ ಕೊಡ್ತಾರಾ ಜಿಟಿ ದೇವೇಗೌಡ!?

1 min read

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮಾಜಿ ಸಚಿವ ಜಿಟಿ ದೇವೇಗೌಡ ಹಾಗೂ ಸಿದ್ದರಾಮಯ್ಯ ಜೊತೆಯಾಗಿ ವೇದಿಕೆ ಹಂಚಿಕೊಂಡಿದ್ದಾರೆ. ಮೈಸೂರಿನ ಹಿನಕಲ್ ಗ್ರಾಮದಲ್ಲಿ ಅಂಬೇಡ್ಕರ್ ಭವನ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗಿಯಾದ ಉಭಯ ನಾಯಕರಿಗೆ ಹಿನಕಲ್ ಗ್ರಾಮಸ್ಥರಿಂದ ಅದ್ದೂರಿ ಸ್ವಾಗತ ಕೋರಲಾಗಿದೆ.

ಕಾರ್ಯಕ್ರಮಕ್ಕೆ ಆಗಮಿಸಿದ ಸಿದ್ದರಾಮಯ್ಯಗೆ ಪುಷ್ಪಾರ್ಚನೆ ಮಾಡಿ ಗ್ರಾಮದ ಮುಂಭಾಗದಲ್ಲೇ ರೋಡ್ ಶೋ ಮುಖಾಂತರ ಬರಮಾಡಿಕೊಳ್ಳಲಾಗಿದೆ. ಸಿದ್ದರಾಮಯ್ಯ ಹಾಗೂ ಜಿಟಿಡಿ ಆಗಮನ ವೇಳೆ ಪಟಾಕಿ ಸಿಡಿಸಿ ಕಾರ್ಯಕರ್ತರು ಸಂಭ್ರಮಿಸಿದ್ದಾರೆ. ಇನ್ನು ಕಾರ್ಯಕ್ರಮದಲ್ಲಿ ಭಾಗಿಯಾದ ಹುಣಸೂರು ಕೈ ಶಾಸಕ‌ ಮಂಜುನಾಥ್ ಸೇರಿ ಹಲವು ಮುಖಂಡರು ಭಾಗಿಯಾಗಿದ್ರು. ಇನ್ನು ಲೋಕಸಭಾ ಚುನಾವಣೆ ಬಳಿಕ ಮತ್ತೇ ಒಂದೇ ವೇದಿಕೆಯಲ್ಲಿ ಸಿದ್ದು ಜಿಟಿಡಿ ಕೂತಿದ್ದು ಜೆಡಿಎಸ್‌ನಿಂದ ಜಿಟಿಡಿ ಹೊರಹೋಗುವ ಹಿನ್ನಲೆಯಲ್ಲಿ ಈ ಕಾರ್ಯಕ್ರಮ ರಾಜಕೀಯ ಚರ್ಚೆಗೆ ಗ್ರಾಸವಾಗಿದೆ.

About Author

Leave a Reply

Your email address will not be published. Required fields are marked *