ಬೆಳಗಾವಿ ಸೊಸೆ ಸೋಫಿಯಾ ಈಗ ಭಾರತದ ಹೆಮ್ಮೆ

1 min read

ಬೆಳಗಾವಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯರ ಹತ್ಯಾಕಾಂಡದ ವಿರುದ್ಧ ಭಾರತ ಪ್ರತೀಕಾರ ತೀರಿಸಿಕೊಂಡಿದ್ದು, ಭಾರತೀಯ ಸೇನೆ ನಡೆಸಿದ ಈ ಕಾರ್ಯಾಚರಣೆಯನ್ನು ಬೆಳಗಾವಿಯ ಸೊಸೆ ಕಾರ್ನಲ್ ಸೋಫಿಯಾ ಖುರೇಷಿ ಜಗತ್ತಿಗೆ ಬಹಿರಂಗಪಡಿಸಿದ್ದಾರೆ.

ಆಪರೇಷನ್ ಸಿಂಧೂರ್ ಎಂದು ಹೆಸರಿಸಲಾದ ಕಾರ್ಯಾಚರಣೆಯಲ್ಲಿ ಪಾಕ್ ಭಯೋತ್ಪಾದಕರ ವಿರುದ್ಧ ಭಾರತೀಯ ಸೇನೆ ವಾಯುದಾಳಿ ನಡೆಸಿತ್ತು. ಪತ್ರಿಕಾಗೋಷ್ಠಿಯಲ್ಲಿ ಕಾರ್ನಲ್ ಸೋಫಿಯಾ ಖುರೇಷಿ ಅವರು ಆಪರೇಷನ್ ಸಿಂಧೂರ್ ಅನ್ನು ಜಗತ್ತಿಗೆ ವಿವರವಾಗಿ ವಿವರಿಸಿದ್ದಾರೆ. ಈ ಮೂಲಕ ಬಹುರಾಷ್ಟ್ರೀಯ ಮಿಲಿಟರಿ ತುಕಡಿಯನ್ನು ಮುನ್ನಡೆಸಿದ ಮೊದಲ ಭಾರತೀಯ ಮಹಿಳಾ ಅಧಿಕಾರಿ ಎಂಬ ಹೆಗ್ಗಳಿಕೆಗೆ ಅವರು ಪಾತ್ರರಾಗಿದ್ದಾರೆ.

ಸೋಫಿಯಾ ಪತಿ ತಾಜುದ್ದೀನ್ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲ್ಲೂಕಿನ ಕೊಣ್ಣೂರು ಗ್ರಾಮದ ನಿವಾಸಿ. ಗಂಡ ಮತ್ತು ಹೆಂಡತಿ ಇಬ್ಬರೂ ಭಾರತೀಯ ಸೇನೆಯಲ್ಲಿ ಕರ್ನಲ್‌ಗಳಾಗಿ ರಾಷ್ಟ್ರಕ್ಕೆ ಸೇವೆ ಸಲ್ಲಿಸುತ್ತಿದ್ದಾರೆ. ತಾಜುದ್ದೀನ್ ಮತ್ತು ಸೋಫಿಯಾ 2015 ರಲ್ಲಿ ಪ್ರೇಮ ವಿವಾಹವಾಗಿದ್ದರು. ಕಾರ್ನಲ್ ಸೋಫಿಯಾ ಮೂಲತಃ ಗುಜರಾತ್‌ನ ಬರೋಡಾದವರು. ಪ್ರಸ್ತುತ, ಸೋಫಿಯಾ ಜಮ್ಮುವಿನಲ್ಲಿ ಕರ್ನಲ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ಅವರ ಪತಿ ತಾಜುದ್ದೀನ್ ಕೂಡ ಝಾನ್ಸಿಯಲ್ಲಿ ಕರ್ನಲ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ.

About Author

Leave a Reply

Your email address will not be published. Required fields are marked *